ಕುಟುಂಬ ರಾಜಕಾರಣ ವಿರೋಧಿಸಿ ಪಕ್ಷದಲ್ಲಿ ಭಾರಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ ಅವರು ಪಕ್ಷದ ಎಳ್ಲಾ ಹುದ್ದೆಗಳಿಗೆ ರಾಜಿನಾಮೆ ಸಲ್ಲಿಸಿದ್ದು, ಬಿಜೆಪಿ ಕಚೇರಿ ಎದುರು ಟಿಕೆಟ್ ವಂಚಿತರು ಧರಣಿ ನಡೆಸಿದ್ದಾರೆ. ನಿರ್ದಿಷ್ಟವಾಗಿ ಕಾಂತೇಶ್ ಅವರಿಗೆ ಟಿಕೆಟ್ ಕೊಡುವುದನ್ನು ಅವರು ವಿರೋಧಿಸಿಲ್ಲವಾದರೂ ಅವರ ರಾಜಿನಾಮೆ ಪತ್ರದಲ್ಲಿ ಈ ಭಾವ ಸ್ಪಷ್ಟವಾಗಿದೆ.