ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಿರ್ದೇಶನದಂತೆ ಅರುಣ್ ಸಿಂಗ್ ಅವರು, ಬಿಎಸ್ ಯಡಿಯೂರಪ್ಪ, ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಆರ್. ಅಶೋಕ್, ಪ್ರಹ್ಲಾದ್ ಜೋಶಿ, ಕೆ.ಎಸ್.ಈಶ್ವರಪ್ಪ, ಸಿಎಂ ಉದಾಸಿ, ಅರವಿಂದ್ ಲಿಂಬಾವಳಿ, ಗೋವಿಂದ ಕಾರಜೋಳ್, ನಳಿನ್ ಕುಮಾರ್ ಕಟೀಲು ಹಾಗೂ ಸಿ.ಟಿ.ರವಿ ಸೇರಿದಂತೆ 12 ಸದಸ್ಯರನ್ನೊಳಗೊಂಡ ಕೋರ್ ಕಮಿಟಿ ರಚಿಸಿದ್ದಾರೆ. ಅಲ್ಲದೆ ರಾಮ್ ಲಾಲ್, ಸಂತೋಷ್, ಪಿ.ಮುರಳಿಧರ್ ರಾವ್ ಹಾಗೂ ಅರುಣ್ ಕುಮಾರ್ ಅವರನ್ನು ಖಾಯಂ ಆಹ್ವಾನಿತರನ್ನಾಗಿ ಮಾಡಲಾಗಿದೆ.