ಜಾರ್ಜ್ ರಾಜಿನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರೆಸಿ ಎಂದು ಶಾಸಕರಿಗೆ ಕರೆ ನೀಡಿರುವ ಬಿಎಸ್ ವೈ, ಅಗತ್ಯ ಬಿದ್ದರೆ ಅಹೋರಾತ್ರಿ ಪ್ರತಿಭಟನೆಯನ್ನೂ ಮಾಡಿ ಎಂದಿದ್ದಾರೆ. ಅಲ್ಲದೆ ಮಡಿಕೇರಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಬಗ್ಗೆ ಇನ್ನು ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.