ಗಣಪತಿ ಆತ್ಮಹತ್ಯೆ ಪ್ರಕರಣದಿಂದ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತಿದ್ದು, ಪ್ರಕರಣವನ್ನು ಎಳೆದಷ್ಟು ಪಕ್ಷ ಮತ್ತು ಸರ್ಕಾರಕ್ಕೆ ಹಾನಿಯಾಗುತ್ತಿದೆ. ರಾಜ್ಯದ ಜನತೆ ಸರ್ಕಾರದ ಧೋರಣೆಯನ್ನು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಹೈಕಮಾಂಡ್ ಈ ಕೂಡಲೇ ಮಧ್ಯಪ್ರವೇಶಿಸಿ ಜಾರ್ಜ್ ಅವರ ರಾಜಿನಾಮೆ ಪಡೆಯಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ. ಅಲ್ಲದೆ ಕೆಲವು ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.