ಪ್ರತಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮಾತನಾಡಿ, ಸರಿ ಗಣಪತಿ ಅವರು ಸಂದರ್ಶನದ ಸಿಡಿಯನ್ನು ಸಭಾಪತಿಗಳಿಗೆ ಈಗಾಗಲೇ ನೀಡಲಾಗಿದೆ. ಅದನ್ನು ಎಲ್ಲ ಸದಸ್ಯರು ವೀಕ್ಷಿಸುವ, ಅದರಲ್ಲಿ ಜಾರ್ಜ್ ಹೆಸರು ಹೇಳದೇ ಇದ್ದದ್ದೆ ಹೌದಾದರೆ, ನಾವು ನಮ್ಮ ಪ್ರತಿಭಟನೆಯನ್ನು ವಾಪಸ್ ಪಡೆಯುತ್ತೇವೆ. ಇಲ್ಲ ನೀವು ಜಾರ್ಜ್ ರಾಜಿನಾಮೆ ಪಡೆಯುತ್ತೀರೋ ಎಂಬುದನ್ನು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು. ಆಗ ಕಲಾಪದಲ್ಲಿ ಗದ್ದಲ, ಕೋಲಾಹಲ ನಡೆಯಿತು..ಇದರ ನಡುವೆಯೇ ವಿಧೇಯಕಗಳನ್ನು ಅಂಗೀಕರಿಸಲಾಯಿತು. ನಂತರ ಸಭಾಪತಿ ಡಿಎಚ್ ಶಂಕರಮೂರ್ತಿ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.