ಆತ್ಮಹತ್ಯೆಯೊಂದೇ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ: ಸಿಎಂ

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಯಾವ ಪೊಲೀಸರು ಜೀವನವನ್ನು ಅಂತ್ಯಗೊಳಿಸಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ..
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಯಾವ ಪೊಲೀಸರು ಜೀವನವನ್ನು ಅಂತ್ಯಗೊಳಿಸಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.

ಮೈಸೂರಿನಲ್ಲಿ ಪೊಲೀಸ್ ವಸತಿ ಗೃಹಗಳ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಸಮಸ್ಯೆ ಇದ್ದರೂ, ಅದನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಇಉಲ್ಲವೇ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ಡಿವೈಎಸ್ಪಿ ಗಳಾದ ಗಣಪತಿ ಮತ್ತು ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ದುರಾದೃಷ್ಟಕರ ಎಂದ ಸಿದ್ದರಾಮಯ್ಯ ಜೀವನ ಅಮೂಲ್ಯವಾದದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿಮ್ಮ ಕುಟುಂಬದ ಬಗ್ಗೆ ಒಂದು ಸಲ ಯೋಚನೆ ಮಾಡಿ ಎಂದು ಹೇಳಿದ್ದಾರೆ.

ಇಬ್ಬರು ಡಿವೈಎಸ್ ಪಿಗಳ ಆತ್ಮಹತ್ಯೆ ಪ್ರಕರಣವನ್ನು ವಿಪಕ್ಷಗಳು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡ ಬಗ್ಗೆ ಟೀಕಿಸಿದ ಸಿದ್ದರಾಮಯ್ಯ ಪೊಲೀಸರು ಹಲವು ವರ್ಷಗಳಿಂದಲೂ ಆತ್ಮಹತ್ಯೆ  ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com