ಡಿ.ಕೆ ಶಿವಕುಮಾರ್ ವೋಟಿಗಾಗಿ ನೋಟು ಎಪಿಸೋಡ್ ಪ್ರಾಯೋಜಕ: ಎಚ್. ಡಿ. ದೇವೇಗೌಡ

ಕಾಂಗ್ರೆಸ್ ಮುಖಂಡ ಹಾಗೂ ಇಂಧನ ಸಚಿವ ಡಿ.ಕೆ ಶಿವಕುಮಾರ್ ವೋಟಿಗಾಗಿ ನೋಟು ಎಪಿಸೋಡಿನ ಪ್ರಾಯೋಜಕ ಎಂದು ಮಾಜಿ ಪ್ರಧಾನಿ ಹಾಗೂ ..
ಡಿ.ಕೆ ಶಿವಕುಮಾರ್ ಮತ್ತು ಎಚ್ .ಡಿ ದೇವೇಗೌಡ
ಡಿ.ಕೆ ಶಿವಕುಮಾರ್ ಮತ್ತು ಎಚ್ .ಡಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಇಂಧನ ಸಚಿವ ಡಿ.ಕೆ ಶಿವಕುಮಾರ್ ವೋಟಿಗಾಗಿ ನೋಟು ಎಪಿಸೋಡಿನ ಪ್ರಾಯೋಜಕ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ.

ರಾಜ್ಯಸಭೆ ಚುನಾವಣೆಯ ಕುದುರೆ ವ್ಯಾಪಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜೆಡಿಎಸ್ ಪಕ್ಷ ಮುಗಿಸಲು ಡಿ.ಕೆ ಶಿವಕುಮಾರ್ ಮಾಡಿರುವ ಸಂಚು ಇದು ಎಂದು  ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯಸಭೆ ಚುನಾವಣೆ ಜೂನ್ 11 ರಂದು ನಡೆಯಲಿದ್ದು, ಜೂನ್ 12 ರಂದು ಪಕ್ಷದ ಶಾಸಕರ ಸಭೆ ಕರೆಯಲಾಗಿದೆ. ಕ್ರಾಸ್ ವೋಟಿಂಗ್ ಮಾಡುವುದಾಗಿ ಹೇಳಿರುವ ಜೆಡಿಎಸ್ ನ 5 ಶಾಸಕರ ವಿರುದ್ಧ ಜೂನ್ 12 ರಂದು ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೂ ಕುದುರೆ ವ್ಯಾಪಾರ ಸಂಬಂಧ ಕಾಂಗ್ರೆಸ್ ಹೈ ಕಮಾಂಡ್ ಜೊತೆ  ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಮಹದ್ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ ಅವರು, ರಾಜ್ಯಸಭೆ ಚುನಾವಣೆ ಮತದಾನದ ನಂತರ ಜಮೀರ್ ಅಹಮದ್ ಖಾನ್, ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸ್, ಇಕ್ಬಾಲ್ ಅನ್ಸಾರಿ ಮತ್ತು ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೂ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಅಂತಿಮ ಕ್ಷಣದವರೆಗೂ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com