ಅಂಬರೀಶ್
ರಾಜಕೀಯ
ಶಾಸಕ ಸ್ಥಾನಕ್ಕೆ ನಟ ಅಂಬರೀಶ್ ರಾಜಿನಾಮೆ
ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಮಾಜಿ ವಸತಿ ಸಚಿವ, ನಟ ಅಂಬರೀಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ...
ಬೆಂಗಳೂರು: ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಮಾಜಿ ವಸತಿ ಸಚಿವ, ನಟ ಅಂಬರೀಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್ ರಚನೆ ವೇಳೆ ಅಂಬರೀಶ್ ಸೇರಿದಂತೆ 14 ಸಚಿವರನ್ನು ಸಂಪುಟದಿಂದ ಕೈಬಿಟ್ಟು, 13 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರು ತಮ್ಮ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂಲಕ ಸ್ಪೀಕರ್ ಇಲ್ಲದ ಕಾರಣ ವಿಧಾನಸಭಾ ಕಾರ್ಯದರ್ಶಿಗೆ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ.
ರಾಜಿನಾಮೆ ಪತ್ರದಲ್ಲಿ ಅಂಬರೀಶ್ ಮಂಡ್ಯ ಜಿಲ್ಲೆ ಶಾಸಕನಾಗಿರುವ ನಾನು ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂಬ ಒಂದೇ ಸಾಲನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಂಬರೀಷ್ ಅವರ ರಾಜಿನಾಮೆ ಪತ್ರವನ್ನು ನಿರಾಕರಿಸಿರುವ ಡೆಪ್ಯೂಟಿ ಸ್ಪೀಕರ್ ಶಿವಶಂಕರ್ ರೆಡ್ಡಿ ಅವರು ಅಂಬರೀಶ್ ಅವರಿಗೆ ಖುದ್ದಾಗಿ ಬಂದು ರಾಜಿನಾಮೆ ಸಲ್ಲಿಸುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ