ಸಚಿವ ಸಂಪುಟ ಪುನಾರಚನೆಯಿಂದಾಗಿ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿ ಬಂಡಾಯವೆದ್ದಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್, ಶ್ರೀನಿವಾಸ್ ಪ್ರಸಾದ್, ಮಾಲಕರೆಡ್ಡಿ ಜೊತೆಗೆ ಮುನಿರತ್ನ ಕೂಡಾ ಅಸಮಾಧಾನವ್ಯಕ್ತಪಡಿಸಿದ್ದರು. ತಾವು 8 ಮಂದಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ಚಿಂತಿಸುತ್ತಿದ್ದೇವೆ ಎಂದು ಸಹ ಮುನಿರತ್ನ ಹೇಳಿಕೆ ನೀಡಿದ್ದರು. ಈಗಾಗಲೇ ರೆಬೆಲ್ ಸ್ಟಾರ್ ಅಂಬರೀಶ್ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದು, ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯೋದಿಲ್ಲ ಎಂದು ಹೇಳಿದ್ದಾರೆ.