ಸಚಿವ ಸ್ಥಾನ ಕಳೆದುಕೊಂಡ ಹಲವು ಹಲವು ಅತೃಪ್ತ ಶಾಸಕರು ನಾಯಕತ್ವ ಬದಲಾವಣೆಯ ಕೂಗು ಎತ್ತಿದ್ದು, ಇದರ ಬೆನ್ನಲ್ಲೇ ಇಂದು ಅತೃಪ್ತ ಸೊರಕೆಗೆ ಕರೆ ಮಾಡಿದ ಸೋನಿಯಾ ಗಾಂಧಿ, ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ಸೊರಕೆ ಅವರು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಕಾರಣವೇನು ಎಂದು ಸೋನಿಯಾ ಗಾಂಧಿಯನ್ನು ಕೇಳಿದ್ದಾರೆ. ಅಲ್ಲದೇ ಬಿಲ್ಲವ ಸಮುದಾಯದವನಾದ ನಾನು ಸಚಿವ ಸಂಪುಟದಿಂದ ಹೊರಗುಳಿದಿರುವುದಕ್ಕೆ ಸಮುದಾಯಕ್ಕೆ ಅಸಮಾಧಾನ ತಂದಿದೆ ಎಂದಿದ್ದಾರೆ.