ಸಂಪುಟ ಪುನಾರಚನೆಯಿಂದಾಗಿ ಸಚಿವ ಸ್ಥಾನ ಕಳೆದುಕೊಂಡ ಹಾಗೂ ಸಚಿವ ಆಕಾಂಕ್ಷಿ ಅತೃಪ್ತ ಶಾಸಕರ ನಾಯಕತ್ವ ಬದಲಾವಣೆಯ ಕೂಗು ತಾರಕಕ್ಕೇರುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಎಂ, ಇಂದು ಸಚಿವ ಸ್ಥಾನ ಕಳೆದುಕೊಂಡ ಪಿ.ಟಿ.ಪರಮೇಶ್ವರ ನಾಯಕ್ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ಮಾಲಿಕಯ್ಯ ಗುತ್ತೆದಾರ್ ಅವರಿಗೆ ಕರೆ ಮಾಡಿ ಮನವೊಲಿಸುವ ಯತ್ನ ಮಾಡಿದ್ದಾರೆ. ಅಲ್ಲದೆ ಇತರೆ ಬಂಡಾಯ ಶಾಸಕರ ಮನವೊಲಿಕೆಗಾಗಿ ದಿಗ್ವಿಜಯ್ ಸಿಂಗ್ ಅವರು ನಾಳೆ ಅತೃಪ್ತ ಶಾಸಕರ ಸಭೆ ಕರೆದಿದ್ದಾರೆ.