ಖರ್ಗೆ ಕಂಡರೆ ಸಿದ್ದರಾಮಯ್ಯ ಗಢಗಢ ನಡುಗುತ್ತಾರೆ: ಮಾಲಕರೆಡ್ಡಿ

ಸಚಿವ ಸ್ಥಾನ ವಂಚಿತ ಹಿರಿಯ ಕಾಂಗ್ರೆಶ್ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಮಾಲಕರೆಡ್ಡಿ
ಮಾಲಕರೆಡ್ಡಿ
Updated on
ಯಾದಗಿರಿ: ಸಚಿವ ಸ್ಥಾನ ವಂಚಿತ ಹಿರಿಯ ಕಾಂಗ್ರೆಶ್ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ. 
ಇಂದು ನಗರದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಮಾಲಕರೆಡ್ಡಿ, ಸಿಎಂ ಸಿದ್ದರಾಮಯ್ಯ ಅಂಜುಬುರುಕ ,ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಗಢಗಢ ಅಂತ ನಡುತ್ತಾರೆ ಎಂದು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದರು. 
ಮಲ್ಲಿಕಾರ್ಜುನ್ ಖರ್ಗೆ ಅವರನ್ನು 1972ರಲ್ಲಿ ರಾಜಕೀಯಕ್ಕೆ ಕರೆತಂದವರು ನಾವು. ಧರಂ ಸಿಂಗ್‌ ಧರ್ಮರಾವ್‌ ಸೇರಿ ಖರ್ಗೆಗೆ ವೇದಿಕೆ ಕಲ್ಪಿಸಿಕೊಟ್ಟಿದ್ದೇವು .ಆದರೆ ಖರ್ಗೆ ಅವರು ಕಳೆದ ಚುನಾವಣೆಯಲ್ಲಿ ನನಗೆ ಟಿಕೇಟ್‌ ತಪ್ಪಿಸಲು ಯತ್ನಿಸಿದ್ದರು ಎಂದು ಆರೋಪಿಸಿದರು. ಅಲ್ಲದೆ ಈಗ ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ, ಅವರ ಮಕ್ಕಳು ಶಾಸಕ, ಸಚಿವರಾದರೆ ಸಾಕು ಎನ್ನುತ್ತಿದ್ದಾರೆ ಎಂದರು.
ಅವರು ಕರೋಡ್‌ಪತಿಗಳಾಗಿ ಮುಂದಿವರಿದು ನಾವು ಗುಲಾಮರಾಗಿ ಬದುಕಬೇಕೆಂಬುದು ಅವರ ಆಸೆ ಎಂದು ಖರ್ಗೆ ವಿರುದ್ದ ಯಾದಗಿರಿ ಶಾಸಕ ಕಿಡಿ ಕಾರಿದರು. 
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನನಗೆ ಸಚಿವ ಸ್ಥಾನ ತಪ್ಪಿಸಿದ್ದು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಲಕರೆಡ್ಡಿ, ಅಧಿಕಾರಕ್ಕಾಗಿ ನಾನು ಯಾರ ಮನೆ ಬಾಗಿಲಿಗೆ ಹೊದವನಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com