ಬೆಂಗಳೂರು: ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಅತೃಪ್ತರ ತಂಡ ಸೇರಿದ್ದ ಮಾಜಿ ಸಚಿವ ಖಮರುಲ್ ಇಸ್ಲಾಂ ಗುರುವಾರ ಯೂಟರ್ನ್ ಹೊಡೆದಿದ್ದು, ನಾನು ಸಿಎಂ ಬದಲಾವಣೆ ಮಾಡಬೇಕೆಂದು ಹೇಳಿಲ್ಲ. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.