ಸಂಸದ ಶ್ರೀರಾಮುಲು ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಬಿ. ಶ್ರೀರಾಮು ಲು ವಿರುದ್ಧ ಜಾಮೀನು ರಹಿತ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ...
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಬಿ. ಶ್ರೀರಾಮು ಲು ವಿರುದ್ಧ ಜಾಮೀನು ರಹಿತ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ಶ್ರೀರಾಮುಲು ಅವರ ವಿರುದ್ಧ ವಾರಂಟ್ ಹೊರಡಿಸಿದೆ. ಮಾರ್ಚ್ 22ರಂದು ರಾಮುಲು ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ಎಂದು ನ್ಯಾಯಾಧೀಶೆ ಸಿ.ಜೆ ವಿಶಾಲಾಕ್ಷಿ ಅವರು ಪೊಲೀಸಿರಿಗೆ ಆದೇಶಿಸಿದ್ದಾರೆ.

2014ರಲ್ಲಿ ಶ್ರೀರಾಮುಲು ಅವರ ವಿರುದ್ಧ ಎಲ್. ಸೋಮಣ್ಣ ಎಂಬುವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com