ಆದಾಯ ಮೀರಿದ ಆಸ್ತಿ : 3 ಎಂಎಲ್ ಸಿ ಗಳ ಬೆಂಗಳೂರಿನ ಮನೆ ಮೇಲೆ ಆದಾಯ ತೆರಿಗೆ ದಾಳಿ

ಕರ್ನಾಟಕದ ಮೂವರು ವಿಧಾನಪರಿಷತ್ ಸದಸ್ಯರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ...
ಗೋವಿಂದರಾಜು, ಸಿ.ಆರ್ ಮನೋಹರ್ ಮತ್ತು ಯು.ಡಿ ಮಲ್ಲಿಕಾರ್ಜುನ
ಗೋವಿಂದರಾಜು, ಸಿ.ಆರ್ ಮನೋಹರ್ ಮತ್ತು ಯು.ಡಿ ಮಲ್ಲಿಕಾರ್ಜುನ
Updated on

ಬೆಂಗಳೂರು:  ಕರ್ನಾಟಕದ ಮೂವರು ವಿಧಾನಪರಿಷತ್ ಸದಸ್ಯರ ಮನೆ ಮೇಲೆ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದಲ್ಲಿ  ವಿಧಾನ ಪರಿಷತ್‌ ಸದಸ್ಯರ ನಿವಾಸಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ಜೆಡಿಎಸ್‌ ಸದಸ್ಯ ಸಿ.ಆರ್‌.ಮನೋಹರ್‌ ಅವರ ಸರ್ಜಾಪುರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮನೋಹರ್‌ ಅವರು ಶಿವರಾಜ್‌ ಕುಮಾರ್‌ ಮತ್ತು ಸುದೀಪ್‌ ಜೊತೆಯಾಗಿ ನಟಿಸುತ್ತಿರುವ ಕಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಈಗಾಗಲೇ ಚಿತ್ರಕ್ಕೆ 100 ಕೋಟಿಯ ಭಾರೀ ಬಜೆಟ್‌ ಘೋಷಿಸಿದ್ದರು.

ಪಕ್ಷೇತರ ಸದಸ್ಯ ಮಲ್ಲಿಕಾರ್ಜುನ್‌ ಅವರ ಜಯನಗರ ನಿವಾಸದ ಮೇಲೂ ದಾಳಿ ನಡೆದಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಡಿ.ಯು.ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ

ಕಾಂಗ್ರೆಸ್‌ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಸದೀಯ ಕಾರ್ಯದರ್ಶಿಗಳಾಗಿದ್ದಾರೆ. ಗೋವಿಂದ್‌‌ ರಾಜು ಅವರ ನಿವಾಸ ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com