ಯಡಿಯೂರಪ್ಪ
ಯಡಿಯೂರಪ್ಪ

ಸಿದ್ದು ಸರ್ಕಾರ ಜನ ವಿರೋಧಿ, ಅಭಿವೃದ್ಧಿ ಶೂನ್ಯ ಸರ್ಕಾರ: ಯಡಿಯೂರಪ್ಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ, ರೈತ, ದಲಿತ, ಅಲ್ಪಸಂಖ್ಯಾತ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಸರ್ಕಾರ...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ, ರೈತ, ದಲಿತ, ಅಲ್ಪಸಂಖ್ಯಾತ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಶೂನ್ಯ ಎಂದು ಟೀಕಿಸಿದರು, ಅಲ್ಲದೆ ಕಾಂಗ್ರೆಸ್ ಸರ್ಕಾರದ ಆಡಳಿತ ನೋಡಿದರೆ, ಸಿದ್ದರಾಮಯ್ಯನವರೇ ಕಾಂಗ್ರೆಸ್ ಕೊನೆಯ ಸಿಎಂ ಎನಿಸುತ್ತಿದೆ ಎಂದರು.
ಸಾಲ ಬಾಧೆಯಿಂದ ಸುಮಾರು 1500 ರೈತರು ಆತ್ಮಹತ್ಯೆಗೆ ಶರಣಾದರು. ಇದು ಈ ಸರ್ಕಾರದ ಸಾಧನೆ. ರೈತ ಕುಟುಂಬಗಳಿಗೆ ಪರಿಹಾರ ನೀಡದಿರುವುದೇ ಈ ಸರ್ಕಾರದ ಸಾಧನೆ. ರೈತರಿಗೆ ಅನ್ಯಾಯ ಮಾಡಿರುವುದೂ ಈ ಸರ್ಕಾರದ ದೊಡ್ದ ಸಾಧನೆ ಎಂದು ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು,
ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಂತ್ರಿ ಮಂಡಲದಲ್ಲಿ ಪರಸ್ಪರ ಸಮನ್ವಯತೆ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.

Related Stories

No stories found.

Advertisement

X
Kannada Prabha
www.kannadaprabha.com