ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಹೆಚ್.ಡಿ. ದೇವೇಗೌಡ

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು...
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದ್ದು, ಮಾಧ್ಯಮಗಳು ಪ್ರತಿಪಕ್ಷ ಪಾತ್ರವನ್ನು ನಿರ್ವಹಿಸುತ್ತಿವೆ. ಈ ಬಗ್ಗೆ ನಾನು ಸರಿಯಾದ ಸಮಯ ಬಂದಾಗ ಮಾತನಾಡುತ್ತೇನೆಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಹೆಸರು ಕುರಿತಂತೆ ಮಾತನಾಡಿರುವ ಅವರು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೂ ಮುನ್ನ ಕುಮಾರಸ್ವಾಮಿ ಈ ಬಗ್ಗೆ ಶಾಸಕರು ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರವಷ್ಟೇ ಅಂತಿಮ ಹೆಸರನ್ನು ಸೂಚಿಸಲಾಗುವುದು ಎಂದಿದ್ದಾರೆ. ಇದೇ ವೇಳೆ ಮೋದಿ ಸರ್ಕಾರ 2 ವರ್ಷ ಪೂರ್ಣಗೊಳಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com