ಪ್ರತಿ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರಿಗೆ ಈ ಬಾರಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ರಾಜ್ಯದಿಂದ ರಾಜಸ್ಥಾನಕ್ಕೆ ಎತ್ತಂಗಡಿ ಮಾಡಲಾಗಿದೆ. ವೆಂಕಯ್ಯ ನಾಯ್ಡು ಅವರನ್ನು ಈ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿದ್ದು, ಅವರ ಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ತರಲಾಗಿದೆ.