ಇದೇ ವೇಳೆ ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿವೆ ಎಂದಿರುವ ಈಶ್ವರಪ್ಪ, ಯಡಿಯೂರಪ್ಪನವರು ಏಕಪಕ್ಷೀಯವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಈ ಬಗ್ಗೆ ಚರ್ಚೆ ನಡೆಸುವಂತೆ ವರಿಷ್ಠರು ಸೂಚಿಸಿದ್ದರು. ರಾಯಣ್ಣ ಬ್ರಿಗೇಡ್ ಹಿಂದುಳಿದವರು, ದಲಿತರ ಪರ ಕೆಲಸ ಮಾಡುವುದಕ್ಕೆ ಹುಟ್ಟಿಕೊಂಡಿರುವ ಸಂಘಟನೆ ಎಂದು ಸ್ಪಷ್ಟಪಡಿಸಿದ್ದಾರೆ.