ಇದೇ ವೇಳೆ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಶ್ರೀನಿವಾಸ್ ಪ್ರಸಾದ್ ಅವರು, ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಹೈಕಮಾಂಡ್ ಬ್ರೇನ್ ವಾಶ್ ಮಾಡಿದ್ದಾರೆ. ಹೀಗಾಗಿ ಅವರು ಕಾರಣವಿಲ್ಲದೆ ನನ್ನ ಕೈಬಿಟ್ಟಿದ್ದಾರೆ ಎಂದರು. ಅಲ್ಲದೆ ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡಲು ಕಾರಣ ಏನು ಅಂತ ಸಿದ್ದರಾಮಯ್ಯ ಹೇಳಬೇಕು ಎಂದರು.