ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ, ಶ್ರೀನಿವಾಸ್ ಪ್ರಸಾದ್ ಅವರು ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಆದರೆ ಅಧಿಕಾರಕ್ಕಾಗಿ ನಾವೂ ಎಂದೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಸಚಿವ ಸ್ಥಾನಕ್ಕಾಗಿ ನಾವು ಮೂರು ವರ್ಷ ಕಾದಿದ್ದೇವೆ. ಸಚಿವರಾಗಲು ನಮಗೆ ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದರು.