ಶ್ರೀನಿವಾಸ್ ಪ್ರಸಾದ್ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ: ಸಚಿವ ರಾಯರೆಡ್ಡಿ

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ...
ಬಸವರಾಜ ರಾಯರೆಡ್ಡಿ
ಬಸವರಾಜ ರಾಯರೆಡ್ಡಿ
ಕೊಪ್ಪಳ: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಶನಿವಾರ ಹೇಳಿದ್ದಾರೆ.
ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ, ಶ್ರೀನಿವಾಸ್ ಪ್ರಸಾದ್ ಅವರು ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಆದರೆ ಅಧಿಕಾರಕ್ಕಾಗಿ ನಾವೂ ಎಂದೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಸಚಿವ ಸ್ಥಾನಕ್ಕಾಗಿ ನಾವು ಮೂರು ವರ್ಷ ಕಾದಿದ್ದೇವೆ. ಸಚಿವರಾಗಲು ನಮಗೆ ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದರು.
ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ತಪ್ಪಿಲ್ಲ. ಅವರ ರಾಜಿನಾಮೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಹಾನಿಯಿಲ್ಲ ಎಂದರು.
ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸರಿ ಇಲ್ಲದಿದ್ದರೂ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿತ್ತು. ಮೂರು ವರ್ಷ ಮಂತ್ರಿಯಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞರಾಗಿರಬೇಕಿತ್ತು. ಆದರೆ ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಮಂತ್ರಿಯಾಗುವುದು ಜನ್ಮಸಿದ್ಧ ಹಕ್ಕಲ್ಲ ಎಂದು ಸಚಿವ ರಾಯರೆಡ್ಡಿ ಮಾಜಿ ಸಚಿವನಿಗೆ ತಿರುಗೇಟು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com