ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ. ಇದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರಿಂದ ಸಾಬೀತಾಗಿದೆ. ಅವರು ಹೇಳಿರುವಂತೆ ಸಿದ್ದರಾಮಯ್ಯ ಕೈಬಿಸಿ ಮಾಡುವವರಿಗೆ ಮಾತ್ರ ಮಂತ್ರಿಗಿರಿ ನೀಡುತ್ತಾರೆ ಎಂದರು. ಅಲ್ಲದೆ ಒಂದೂವರೆ ವರ್ಷದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದರು.