ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಷಣದ ವೇಳೆ ಸಿದ್ದರಾಮಯ್ಯ ಅವರು ಗುಪ್ತಚರ ಇಲಾಖೆ ಮಾಧ್ಯಮಗಳ ವರದಿಯನ್ನಾಧರಿಸಿ ಕೆಲಸ ಮಾಡುತ್ತಿದೆ. ಇದು ಹಾಗಾಗಬಾರದು, ಮುಂದೆ ಏನಾಗುತ್ತದೆ ಎನ್ನುವುದನ್ನು ಅವರು ಕಂಡು ಹಿಡಿಯಬೇಕು ಎಂದರು. ಅಲ್ಲದೆ ಗುಪ್ತಚರ ಇಲಾಖೆಯ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಅಗತ್ಯವಿದ್ದು, ನೇಮಕಾತಿಯ ವೇಳೆಯೂ ಸಮರ್ಥರನ್ನೇ ಆಯ್ಕೆ ಮಾಡಬೇಕಿದೆ ಎಂದರು.