ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಅಂಗೀಕರಿಸಿದ್ದಾರೆ...
ವಿ. ಶ್ರೀನಿವಾಸ್ ಪ್ರಸಾದ್
ವಿ. ಶ್ರೀನಿವಾಸ್ ಪ್ರಸಾದ್
Updated on

ಬೆಂಗಳೂರು: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಅಂಗೀಕರಿಸಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದರಿಂದ ಸಿಎಂ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್ ಅಕ್ಟೋಬರ್ 17 ಶಾಸಕ ಸ್ಥಾನಕ್ಕೆ ರಂದು ರಾಜೀನಾಮೆ ಸಲ್ಲಿಸಿದ್ದರು.

ಈ ಸಂಬಂಧ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಭಾಪತಿ ಕೋಳಿವಾಡ, ಸಂವಿಧಾನ ಅನುಚ್ಛೇದ 190(3) (ಬಿ) ಅಡಿ ರಾಜೀನಾಮೆ ಅಂಗೀಕರಿಸಲಾಗಿದೆ.

ಇಂದು ಮಧ್ಯಾಹ್ನ ಸ್ಪೀಕರ್ ಕಚೇರಿಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಕರೆ ಮಾಡಲಾಗಿತ್ತು. ಈ ವೇಳೆ ರಾಜೀನಾಮೆ ನಿರ್ಧಾರವನ್ನು ಪರಿಶೀಲಿಸುತ್ತೀರಾ ಅಥವಾ ಹಿಂಪಡೆಯುತ್ತೀರಾ ಎಂದು ಕೇಳಲಾಯಿತು, ತಾವು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದೇನೆ,ಅಂಗೀಕರಿಸಬೇಕೆಂದು ಅವರು ತಿಳಿಸಿದರು, ಹೀಗಾಗಿ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆ ಅಂಗೀಕರಿಸಿದ್ದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com