ಬಿಜೆಪಿ ಸಂಸದರು ನಿಜವಾಗಿಯೂ ಗಂಡಸರಾ? ಶಾಸಕ ಬಾಲಕೃಷ್ಣ ಪ್ರಶ್ನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ...
ಎಚ್.ಸಿ ಬಾಲಕೃಷ್ಣ
ಎಚ್.ಸಿ ಬಾಲಕೃಷ್ಣ

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶಗೊಂಡಿದ್ದಾರೆ.

ಮಂಡ್ಯದಲ್ಲಿ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ನಿಜವಾಗ್ಲೂ ಗಂಡಸ್ರಾ ಪ್ರಶ್ನಿಸಿದ್ದಾರೆ. ಬಿಜೆಪಿ ಅವರಿಗೆ ಯೋಗ್ಯತೆ ಇದ್ದರೆ ಕಾವೇರಿ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲಿ ಸವಾಲು ಹಾರಿದ್ದಾರೆ.

ಈ ವೇಳೆ ಬಿಜೆಪಿ ಸಂಸದರ ವಿರುದ್ಧ ಬಾಲಕೃಷ್ಣ ಟೀಕಾಪ್ರಹಾರ ನಡೆಸಿದರು. ಸೆ.20ರ ಮಧ್ಯಂತರ ಆದೇಶದ ನಂತರ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತಕುಮಾರ್ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com