ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ
ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಜನಾರ್ದನ ಪೂಜಾರಿ ಉರುಳು ಸೇವೆ: ಸಿಎಂ ಗೂ ಆಹ್ವಾನ

ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ...
Published on

ಮಂಗಳೂರು: ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ  ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಯಾವುದೇ ಅಪಾಯಕಾರಿ ಘಟನೆಗಳು ನಡೆಯಬಾರದು ಮತ್ತು ರಾಜ್ಯದ ಜನತೆಯ ಹಿತ ಕಾಪಾಡಬೇಕು ಎಂದು ಹಾರೈಸಿ ಇದೇ 18ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಲಿದ್ದೇನೆ’ಈ ಉರುಳು ಸೇವೆಯಲ್ಲಿ ಸಿಎಂ ಸಿದ್ದರಾಮಯ್ಯ ನವರು ಭಾಗವಹಿಸುವ ಮೂಲಕ ಮಾದರಿಯಾಗಬೇಕೆಂದು ಅವರು ಹೇಳಿದ್ದಾರೆ.

6 ಕೋಟಿ ಜನರಿಗಾಗಿ ಉರುಳು ಸೇವೆ ಮಾಡುತ್ತಿದ್ದು, ಸಿದ್ದರಾಮಯ್ಯ ಅವರ ಒಳಿತಿಗಾಗಿಯೂ ಈ ಸೇವೆ ಮಾಡಲಿದ್ದೇನೆ ಎಂದರು. ಕಾವೇರಿ ವಿಚಾರದಲ್ಲಿ 3 ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಈ ನಿಟ್ಟಿನಲ್ಲಿ ಯಾವುದೇ ದುರ್ಘಟನೆಗಳು ನಡೆಯದಂತೆ ದೇವರ ಮೊರೆ ಹೋಗಬೇಕಾದದ್ದು ಎಲ್ಲರ ಕರ್ತವ್ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com