ಮಂಗಳೂರು: ಕೆ.ಜೆ. ಜಾರ್ಜ್ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಂಡರೆ ರಾಜ್ಯ ಕಾಂಗ್ರೆಸ್ ಸರ್ವನಾಶ ಆಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಶವಾದರೆ ಮತ್ತೆ ಕಾಂಗ್ರೆಸನ್ನು ಬದುಕಿಸಲು ಸಾಧ್ಯವಿಲ್ಲ. ನಾನು ಈ ಹಿಂದೆ ಹೇಳಿದಂತೆ ಸಿಐಡಿ ರಿಪೋರ್ಟ್ ನೀಡಿದೆ. ಪ್ರಕರಣವನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಿಐಡಿಗೆ ನೀಡುವ ಮೂಲಕ ಸಿಎಂ ಅವರು ಜಾರ್ಜ್ರನ್ನು ಬದುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಗಣಪತಿ ಡೆತ್ನೋಟ್ನಲ್ಲಿ ಜಾರ್ಜ್ ಸೇರಿದಂತೆ ಇಬ್ಬರು ಅಧಿಕಾರಿಗಳ ಹೆಸರು ಹೇಳಿದ್ದಾರೆ. ಡೆತ್ನೋಟ್ಗೆ ಕೋರ್ಟ್ ಮಹತ್ವ ನೀಡುತ್ತದೆ ಹೀಗಾಗಿ ಸುಪ್ರೀಂ ಕೋರ್ಟ್ಗೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಇನ್ನೂ ಉಡುಪಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುತ್ತಿರುವ ಜನಾರ್ದನ ಪೂಜಾರಿ ವಿರುದ್ಧ ಪಕ್ಷ ಶಿಸ್ತು ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಾರ್ಜ್ ವಿರುದ್ಧ ಹೇಳಿಕೆ ನೀಡಿರುವ ಪೂಜಾರಿ ಪಕ್ಷ ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ,
Advertisement