ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಕೃಪಾ ಪೋಷಕರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಪಕ್ಷದ ಹಿತದಿಂದ ಮತ್ತು ಎಲ್ಲಾ ಹಿಂದುಳಿದ ಸಮುದಾಯವನ್ನು ಪಕ್ಷಕ್ಕೆ ಕರೆ ತರುವ ಉದ್ದೇಶದಿಂದಲೆ ಬ್ರಿಗೇಡ್ ಹುಟ್ಟು ಹಾಕಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಯಣ್ಣ ಬ್ರಿಗೇಡ್ ಗೂ ಪಕ್ಷಕ್ಕೂ ಯಾವದೇ ಸಂಭಂದವಿಲ್ಲ ಎಂದು ಯಡಿಯೂರಪ್ಪ ಹೇಳುತ್ತಿದ್ದು, ನೂತನ ಬ್ರಿಗೇಡ್ ಪಕ್ಷದ ಇಬ್ಬರು ಹಿರಿಯ ನಾಯಕರ ನಡುವಿನ ಕಲಹಕ್ಕೆ ಕಾರಣವಾಗಿತ್ತು.