ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಅವರು ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಒರೆಗೆ ಹಚ್ಚಿದ್ದಾರೆ. ತಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಭರವಸೆಯಿದ್ದು, ಅವು ತಮ್ಮನ್ನು ಕೈಹಿಡಿಯುತ್ತದೆ ಎಂಬು ಆತ್ಮವಿಶ್ವಾಸದಲ್ಲಿದ್ದಾರೆ. ಪಾರದರ್ಶಕ ಆಡಳಿತ, ಬಸವಣ್ಣನವರ ಆದರ್ಶದಂತೆ ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲು ಸರ್ಕಾರ ಬದ್ಧವಾಗಿದ್ದು, 2018 ರಲ್ಲಿ ಅಧಿಕಾರಕ್ಕೇರಬೇಕೆಂಬ ಬಿಜೆಪಿ ಕನಸು ನುಚ್ಚು ನೂರಾಗಲಿದೆ ಎಂದು ಅವರು ಹೇಳಿದ್ದಾರೆ.