ಚಾಮರಾಜನಗರ: ಏಪ್ರಿಲ್ 9ರಂದು ನಡೆಯಲಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಕೊನೆ ಗಳಿಗೆಯಲ್ಲಿ ಮತದಾರರನ್ನು ಸೆಳೆಯಲು ಹಣ ಸಾಗಿಸುತ್ತಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಕಾರನ್ನು ಶುಕ್ರವಾರ ಸಂಜೆ ಜಪ್ತಿ ಮಾಡಲಾಗಿದೆ.