ಜೆಡಿಎಸ್ ಸೇರ್ಪಡೆ ಸಂಬಂಧ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಮಾಜಿ ಶಾಸಕ ಸುರೇಶ್ ಗೌಡ ಮತ್ತು ಮಾಜಿ ಸಚಿವ ಶಿವರಾಮೇಗೌಡ ಭೇಟಿ ನೀಡಿದರು. ಇವರಿಗೆ ಮಂಡ್ಯ ಸಂಸದ ಪುಟ್ಟರಾಜು, ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಾಥ್ ನೀಡಿದರು. ಈ ವೇಳೆ ಉಭಯ ನಾಯಕರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಜೆಡಿಎಸ್ ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.