ಚೆನ್ನಪಟ್ಟಣ ಕ್ಷೇತ್ರದಲ್ಲಿ ಅನಿತಾ ಸ್ಪರ್ಧೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಗೆ ಬಿಟ್ಟದ್ದು: ದೇವೇಗೌಡ

2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ...
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ
Updated on
ಬೆಂಗಳೂರು: 2018 ವಿಧಾನಸಭಾ ಚುನಾವಣೆ ವೇಳೆ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ. 
ವಿಧಾನಸಭಾ ಚುನಾವಣೆ ವೇಳೆ ಕುಟುಂಬದಿಂದ ಕೇವಲ ಇಬ್ಬರೂ ಮಾತ್ರ ಕಣಕ್ಕಿಳಿಯಲಿದ್ದಾರೆಂದು ಈ ಹಿಂದೆ ದೇವೇಗೌಡ ಅವರು ಹೇಳಿಕೆ ನೀಡಿದ್ದರು. ಇದರ ನಡುವೆಯೇ ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಯವರು ಸ್ಫರ್ಧಿಸುವ ಕುರಿತಂತೆ ಮಾತುಗಳು ಕೇಳಿಬಂದಿದ್ದವು. 
ಚೆನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಕುರಿತಂತೆ ಈ ವರೆಗೂ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಈ ಬಗ್ಗೆ ಸ್ವತಃ ಹೆಚ್.ಡಿ.ಕುಮಾರಸ್ವಾಮಿಯವರೇ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ. 
ಇದೇ ವೇಳೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು 2018ರ ಚುನಾವಣೆ ವೇಳೆ ರಾಜಕೀಯ ಪ್ರವೇಶ ಮಾಡಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸುವ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. 
ರೇವಣ್ಣ ಅವರ ಮಗ ಪ್ರಜ್ವಲ್ ಅವರು ಹಾಸನದಲ್ಲಿ ಕೆಲ ಪಕ್ಷಗಳೊಂದಿಗೆ ಕೈಜೋಡಿಸಿ ಕಳೆದ 6 ವರ್ಷಗಳಿಂದಲೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಮುಂದಿನ 2018ರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com