ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ್ದಾರೆ, ಜೊತೆಗೆ ಗೃಹಖಾತೆಯು ಅವರ ಬಳಿಯಿದೆ. ಹಾಗಾಗಿ ಅವರನ್ನು ಬದಲಿಸಿ ಹೊಸಬರನ್ನು ನೇಮಿಸಬೇಕೆಂದು ಸಿದ್ದರಾಮಯ್ಯ ಹೈ ಕಮಾಂಡ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ, ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಭರ್ತಿ ಮಾಡುವ ಕುರಿತು ಈಗ ಪ್ರಸ್ತಾಪಿಸಲಾಗಿಲ್ಲ. ಮುಂದಿನ ತಿಂಗಳು ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.