ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಬೆಂಗಳೂರಿಗೆ ಆಗಮಿಸಿದ ನಂತರ ಮಾತನಾಡಿದ ದಿನೇಶ್ ಗುಂಡೂರಾವ್, ಕೆಲ ಹಿರಿಯ ನಾಯಕರು ಸರ್ಕಾರದ ವಿರುದ್ಧ ಹಾಗೂ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವುದು ಹೈ ಕಮಾಂಡ್ ಗಮನಕ್ಕೆ ಬಂದಿದೆ. ತಪ್ಪು ತಿದ್ದುಕೊಳ್ಳದಿದ್ದರೇ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಹೈಕಮಾಂಡ್ ಸಂದೇಶ ರವಾನಿಸಿದೆ ಎಂದು ಹೇಳಿದ್ದಾರೆ.