ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಮೇವು ಪೂರೈಕೆಯಲ್ಲಿ ಚಿತ್ರದುರ್ಗ, ಯಾದಗಿರಿ, ಗುಲ್ಬರ್ಗಾದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ದೂರು ನೀಡಿದರೂ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ ಎಂದು ಆರೋಪಿಸಿದರು.