ಕುತೂಹಲ ಹೆಚ್ಚಿಸಿದೆ ನಟ ಅಂಬರೀಷ್ -ಸಿಎಂ ಸಿದ್ದರಾಮಯ್ಯ ಭೇಟಿ

ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ನಿನ್ನೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ....
ಅಂಬರೀಷ್ ಮತ್ತು ಸಿಎಂ ಸಿದ್ದರಾಮಯ್ಯ
ಅಂಬರೀಷ್ ಮತ್ತು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ನಿನ್ನೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಅಂಬರೀಷ್ ಭೇಟಿ ಮಾಡಿರುವ ಸಿದ್ದರಾಮಯ್ಯ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 
ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.
ನಿನ್ನೆ ರಾತ್ರಿ ನಗರದ ಗಾಲ್ಫ್‌ ಕೋರ್ಸ್ ರಸ್ತೆಯಲ್ಲಿರುವ ಅಂಬರೀಶ್‌ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಮತ್ತು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಜೊತೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. 
ನನ್ನ ಸಂಪುಟದಿಂದ ಕೈಬಿಟ್ಟಿದ್ದಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ. ಪ್ರೀತಿ-ವಿಶ್ವಾಸದಿಂದ ಮುಖ್ಯಮಂತ್ರಿ ಮನೆಗೆ ಬಂದಿದ್ದರು. ನಾನು ಬಿಜೆಪಿಗೆ ಹೋಗೋದು ಸುಳ್ಳು ಎಂದು ಅಂಬರೀಷ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಅಂಬರೀಶ್‌ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಅಸಮಾಧಾನಗಳಿಲ್ಲ, ಅಂಬರೀಶ್‌ ನನ್ನ ಹಳೆಯ ಸ್ನೇಹಿತ, ನಾವಿಬ್ಬರೂ ಒಳ್ಳೆಯ ಸ್ನೇಹಿತರಾಗೇ ಇದ್ದೇವೆ. ಅವರ ಮನೆಯಲ್ಲಿ ಊಟಕ್ಕೆ ಸೇರಿದ್ದೆವು. ರಾಜಕಾರಣಿಗಳು ಭೇಟಿಯಾದರೆ ರಾಜಕೀಯ ಮಾತನಾಡದೇ ಇರುತ್ತೇವಾ ಎಂದು ತಮ್ಮ ಎಂದಿನ ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com