ಯಾರ ಜೊತೆಗೂ ಮೈತ್ರಿಯಿಲ್ಲ, ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ: ಸಿದ್ದರಾಮಯ್ಯ

2018 ವಿಧಾನಸಭಾ ಚುನಾವಣೆಗೆ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on
ಶಿವಮೊಗ್ಗ: 2018 ವಿಧಾನಸಭಾ ಚುನಾವಣೆಗೆ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮತನಾಡಿರುವ ಅವರು, ಮಹಾಮೈತ್ರಿ ದೇಶಕ್ಕೆ ಬೇಕು, ರಾಜ್ಯಕ್ಕಲ್ಲ. ರಾಜ್ಯದಲ್ಲಿ ಕೋಮುವಾದಿ ಪಕ್ಷಗಳು ಶಕ್ತಿಯುತವಾಗಿಲ್ಲವಾದ್ದರಿಂದ ಯಾವುದೇ ಪಕ್ಷದೊಂದಿಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
ದೇಶದಲ್ಲಿ ಕೋಮುವಾದಿ ಪಕ್ಷದ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡುವ ಅಗತ್ಯವಿದೆ. ಆದರೆ, ರಾಜ್ಯಕ್ಕೆ ಇದು ಅಗತ್ಯವಿಲ್ಲ. ಚುನಾವಣೆ ಹಿನ್ನಲೆಯಲ್ಲಿ ಮುನ್ನಲೆಗೆ ಬಂದಿದ್ದ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ. ವಿಐಪಿಗಳು ಮತ್ತು ವಿವಿಪಿಗಳು ಮತ್ತು ವಿವಿಐಪಿಗಳ ವಾಹನಗಳ ಮೇಲೆ ಕೆಂಪು ದೀಪ ಬಳಕೆ ಮಾಡುವ ಕುರಿತಂತೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆಗಳೂ ಬಂದಿಲ್ಲ. ಪ್ರಸ್ತಾವನೆಗಳು ಬಂದ ಬಳಿಕ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು. 
ಇದೇ ವೇಳೆ ಹಾಲಿ ಅಂಗನವಾಡಿಗಳಲ್ಲಿ ಪರಿಶಿಷ್ಟ ಮಕ್ಕಳಿಗೆ ಮಾತ್ರ ಮೊಟ್ಟೆ ಕೊಡುವ ಯೋಜನೆ ಇದೆ. ಎಲ್ಲಾ ಮಕ್ಕಳಿಗೂ ವಿಸ್ತರಿಸುವ ಚಿಂತನೆ ಇದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com