ಬೆಂಗಳೂರು: ಕೊನೆಗೂ ವಿಧಾನಪರಿಷತ್ ನ ನಾಮ ನಿರ್ದೇಶನ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮುಖಂಡರಾದ ಮೋಹನ್ ಕೊಂಡಜ್ಜಿ, ಸಿಎಂ ಲಿಂಗಪ್ಪ ಹಾಗೂ ಮಾಜಿ ಮೇಯರ್ ಪಿಆರ್ ರಮೇಶ್ ಅವರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಿ ರಾಜ್ಯಪಾಲರ ವಜುಭಾಯಿ ವಾಲಾ ಅವರಿಗೆ ಶಿಫಾರಸು ಮಾಡಿದ್ದಾರೆ. ಆದರೆ ಈ ಬಾರಿಯೂ ಕಾಂಗ್ರೆಸ್ ಮುಖಂಡ ಕೆಪಿ ನಂಜುಂಡಿ ಅವರ ಹೆಸರನ್ನು ಕೈಬಿಟ್ಟಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.