ಸಮಾವೇಶದ ಬಳಿಕ ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಅಶ್ವತ್ ನಾರಾಯಣ್, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಸಂಸದ ಪಿ.ಸಿ.ಮೋಹನ್ ಅವರು, ಈಶ್ವರಪ್ಪ ಹಾಗೂ ಬಿಎಸ್ ವೈ ಅವರ ನಡುವೆ ಇದ್ದ ಮುನಿಸಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ದೆಹಲಿಗೆ ಕರೆಯಿಸಿ ಸಂಧಾನ ಮಾಡಿ ಕಳುಹಿಸಿದ ಮೇಲೆಯೂ ಈಶ್ವರಪ್ಪ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದರು.