ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಶಿವರಾಂ ಕಾರಂತ್ ಲೇಔಟ್ ಡಿನೋಟಿಫೈ ಮಾಡಿಲ್ಲ. 3,546 ಎಕರೆ ಭೂಸ್ವಾಧೀನಕ್ಕಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ರೈತರ ವಿರೋಧ ವ್ಯಕ್ತಪಡಿಸಿದ ನಂತರ ಈ ಪೈಕಿ 257 ಎಕರೆಯನ್ನು ಪ್ರಾಥಮಿಕ ಅಧಿಸೂಚನೆಯಿಂದ ಕೈಬಿಡಲಾಗಿತ್ತು ಅಷ್ಟೆ. ಡಿನೋಟಿಫೈ ಮಾಡಿಲ್ಲ. ಒಂದು ವೇಳೆ ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಡಿನೋಟಿಫೈ ಮಾಡಿದರೆ ಅದು ತಪ್ಪಾಗುತ್ತಿತ್ತು ಎಂದು ಹೇಳಿದ್ದಾರೆ.