ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಅವರು ಪಕ್ಷ ಸಂಘಟನೆ ಮತ್ತು ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ನಾಯಕರಿಗೆ ಹಲವು ಸೂಚನೆ ಗಳನ್ನು ನೀಡಿದ್ದು, ಇದನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆಯೇ ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆಸಲಾಯಿತು. ಪಕ್ಷ ಸಂಘಟನೆ ನಿಟ್ಟಿನಲ್ಲಿ ರಾಜ್ಯದಲ್ಲಿರುವ 57 ಸಾವಿರಕ್ಕೂ ಹೆಚ್ಚು ಬೂತ್ ಗಳಲ್ಲಿ 9 ಸದಸ್ಯರ ನ್ನೊಳಗೊಂಡ ಬೂತ್ ಸಮಿತಿಯನ್ನು ರಚಿಸಬೇಕು. ಈ ಸಮಿತಿಯಲ್ಲಿ ಅಧ್ಯಕ್ಷರು, ಕಾರ್ಯ ದರ್ಶಿ ಸಹಿತ ತಲಾ ಇಬ್ಬರು ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು ಇರಬೇಕು ಎಂದು ಶಾ ತಿಳಿಸಿದ್ದಾರೆ.