ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಿಜೆಪಿ ಮೌನದ ಮೊರೆ ಹೋಗಿದೆ. ಸಮುದಾಯಗಳ ನಡುವಿನ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ, ಸಮುದಾಯದ ನಾಯಕರು, ಮಠಾಧೀಶರು ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ. ಬಿಜೆಪಿ ಕಾದು ನೋಡುವ ತಂತ್ರಕ್ಕೆ ಶರಣಾಗಿದೆ ಎಂದು ಪಕ್ಷದ ವಕ್ತಾರ ಸುರೇಶ್ ಕುಮಾರ್ ಹೇಳಿದ್ದಾರೆ.