ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ನ ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ರಘು ಆಚಾರ್, ಎನ್.ಎಸ್.ಬೋಸರಾಜ, ಎಸ್.ರವಿ, ಜೆಡಿಎಸ್ನ ಸಿ.ಆರ್.ಮನೋಹರ್, ಅಪ್ಪಾಜಿ ಗೌಡ ಮತ್ತು ಪಕ್ಷೇತರ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಅವರು ಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಜಾ ಅವರಿಗೆ ವರದಿ ಸಲ್ಲಿಸಿದ್ದರು.