ನಾವೆಲ್ಲ ಚಿಕ್ಕವರಿದ್ದಾಗ ಬೆಳಿಗ್ಗೆ ಎದ್ದ ಕೂಡಲೇ ನದಿ, ಹಳ್ಳ, ಕಾಲುವೆ ಹುಡುಕಿಕೊಂಡು ಹೋಗುತ್ತಿದ್ದೆವು. ಕೆಲವು ಕಡೆಗಳಲ್ಲಿ ಕುಡಿಯುವುದಕ್ಕೂ ತೊಳೆಯುವುದಕ್ಕೂ ಒಂದೇ ಹಳ್ಳದ ನೀರನ್ನು ಬಳಸುತ್ತಿದ್ದರು. ಆಗೆಲ್ಲ ಜನರ ದೇಹಗಳಲ್ಲಿ ಪ್ರತಿರೋಧ ಶಕ್ತಿ ಇತ್ತು. ಹಾಗಾಗಿ ಆರೋಗ್ಯ ಸಮಸ್ಯೆ ಕಾಡುತ್ತಿರಲಿಲ್ಲ. ಪರಿಸರ ಚೆನ್ನಾಗಿದ್ದರೆ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ. ಈ ಕಾರಣಕ್ಕಾಗಿ ಬಯಲು ಬಹಿರ್ದೆಸೆ ಮುಕ್ತವಾಗುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ಹೇಳಿದರು.