ಪ್ರತಾಪ್ ಸಿಂಹ ಒಬ್ಬ ಹುಚ್ಚ, ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಚಿವ ವಿನಯ ಕುಲಕರ್ಣಿ

ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಹುಚ್ಚ, ಬಿಜೆಪಿಯವರು ಮೊದಲು ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು....
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ
ಧಾರವಾಡ: ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಹುಚ್ಚ, ಬಿಜೆಪಿಯವರು ಮೊದಲು ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ ಅವರು ಸೋಮವಾರ ಲೇವಡಿ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇತ್ತೀಚಿನ ದಿನಗಳಲ್ಲಿ ಪ್ರತಾಪ್ ಸಿಂಹ ಅವರ ವ್ಯಕ್ತಿತ್ವ ಏನು ಎಂಬದು ಜನತೆಗೆ ತಿಳಿಯುತ್ತಿದೆ ಎಂದರು.
ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಅವರಿಗೆ ಅವಮಾನ ಮಾಡಿದಾಗ ಬಿಜೆಪಿ ನಾಯಕರಾರು ಚಕಾರ ಎತ್ತಿಲ್ಲಿಲ್ಲ, ಬೇರೆ ಪಕ್ಷದವರು ಅವಮಾನ ಮಾಡಿದ್ದರೆ ಈಗಾಗಲೇ ಮುತ್ತಿಗೆ ಪ್ರತಿಭಟನೆಗಳನ್ನು ರಾಜ್ಯಾದ್ಯಂತ ಮಾಡ್ತಾ ಇದ್ರು. ಆದರೆ, ಈಗ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು ತುಟಿ ಬಿಚ್ಚುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಹಿರಿಯ ಸಂಶೋಧಕ, ಎಂ.ಎಂ. ಕಲಬುರ್ಗಿ ಅವರ ಹತ್ಯೆ ಆದಾಗಲೂ ಬಿಜೆಪಿ ಮಾತಾಡಿಲ್ಲ. ಈಗ ಚುನಾವಣೆ ಹತ್ತಿರವಾದಂತೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವಿನಯ್ ಕುಲಕರ್ಣಿ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com