ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶೆಟ್ಟರ್, ಬಿಜೆಪಿಯವರ ಕಿರುಕುಳ ತಾಳಲಾಗದೆ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ ಎಂದು ಕಲಬುರ್ಗಿಯಲ್ಲಿ ಸಿಎಂ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಯೋಗೀಶ್ ಗೌಡ ಹತ್ಯೆ ಸಂಬಂಧ ಒಂದು ವರ್ಷದಿಂದ ತನಿಖೆ ನಡೆದಿದೆ. ಹತ್ಯೆ ಪ್ರಕರಣ ಮುಚ್ಚಿಹಾಕಲು ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.