ಇಂದು ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಡಿಕೆ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರನ್ನು ಒಲಿಸಿಕೊಳ್ಳಲು 75 ದಿನ ನಿರಂತರ ಹರಸಾಹಸ ಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದವರು ಹಲವು ಸಮುದಾಯದವರ ಮುಖಾಂತರ ಚುನಾವಣಾ ಪ್ರಚಾರ ಮಾಡಿದರು. ಕಾಂಗ್ರೆಸ್ ಮೂಲ ಮತದಾರರನ್ನು ತಮ್ಮತ್ತ ಸೆಳೆಯಲು ವಿಫಲವಾಗಿದೆ. ಗುಜರಾತ್ ನಲ್ಲಿ ಬೇರೆ ಪಕ್ಷ ಇದ್ದಿದ್ದರೆ ಎರಡೂ ರಾಷ್ಟ್ರೀಯ ಪಕ್ಷಗಳು ನೆಲ ಕಚ್ಚುತ್ತಿದ್ದವು. ಆರು ಲಕ್ಷ ನೋಟಾ ಮತದಾನ ಆಗಿದೆ ಎಂದು ತಿಳಿಸಿದ್ದಾರೆ.