ಅತ್ತ ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್ ಚಾಲ್ತಿಯಲ್ಲಿರುವಂತೆಯೇ ಇತ್ತ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಚೇರಿಗಳಲ್ಲಿ ವ್ಯಾಪಕ ಬಿರುಸಿನ ರಾಜಕೀಯ ಚಟುವಟಿಕೆಗಳನ್ನು ನಡೆಯುತ್ತಿದ್ದು, ಇಂದು ಬೆಳಗ್ಗೆ ಬಿಜೆಪಿ ಕಚೇರಿಗೆ ಪಕ್ಷದ ಕಿಸಾನ್ ಮೋರ್ಚಾದ ರೈತರು ಆಗಮಿಸಿದ್ದು, ನಾಯಕರೊಂದಿಗೆ ಚರ್ಚೆ ನಡೆಸಿದರು. ಸುಮಾರು ಅರ್ಧಗಂಟೆ ನಡೆದ ಚರ್ಚೆ ಬಳಿಕ ಹೊರ ಬಂದ ರೈತರು ಕಾಂಗ್ರೆಸ್ ಪಕ್ಷದ ಕಚೇರಿ ಎದುರು ತಾವು ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿದ ರೈತರು ನಾವು ಬಿಜೆಪಿ ಪಕ್ಷದ ಪರವಾಗಿ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.