ತೀರ್ಥಹಳ್ಳಿಯಲ್ಲಿ ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ ಮೇಲೆ ರಾಜ್ಯ ಜನತೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕೇವಲ ರಾಜ್ಯ ಅಷ್ಟೇ ಅಲ್ಲ, ದೇಶದ ಜನತೆಯ ನಂಬಿಕೆಯನ್ನೂ ಕಾಂಗ್ರೆಸ್ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ತಾವೇ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರಿಗೆ ತಮ್ಮನ್ನು ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ. ಅರಸು ಅವರು ಭೂ ಸುಧಾರಣಾ ಕಾಯಿದೆಯನ್ನು ಜಾರಿಗೆ ತರುವ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಜೀವನವನ್ನು ಬದಲಾಯಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಶ್ರೀಮಂತರಿಗೆ ಹಾಗೂ ಗಣಿಗಾರಿಗಕೆಗೆ ಬೆಂಬಲವನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ.